ಯಮುನಾ ಪ್ರವಾಹಕ್ಕೆ ತತ್ತರಿಸಿದ ದೆಹಲಿ: ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವರುಣನ ಅಬ್ಬರಕ್ಕೆ ನಲುಗಿದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬರುತ್ತಿದ್ದು, ಈ ನಡುವೆ ಯಮುನಾ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 10,000 ರೂ.ಪರಿಹಾರವಾಗಿ ಘೋಷಣೆ ಮಾಡಿದ್ದಾರೆ.

ಪ್ರತಿ ಪ್ರವಾಹ ಪೀಡಿತ ಕುಟುಂಬಕ್ಕೆ 10,000 ರೂ. ಹಣವನ್ನು ಪರಿಹಾರವಾಗಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಈ ಕುರಿತು ಟ್ವೀಟ್​​ ಮಾಡಿರುವ ಸಿಎಂ, ‘ಪ್ರವಾಹದಲ್ಲಿ ಆಧಾರ್ ಕಾರ್ಡ್‌ನಂತಹ ಪ್ರಮುಖ ದಾಖಲೆಗಳನ್ನು ಕಳೆದುಕೊಂಡವರಿಗೆ ವಿಶೇಷ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಪ್ರವಾಹದ ಸಂದರ್ಭದಲ್ಲಿ ತೊಂದರೆಗೆ ಸಿಲುಕಿದ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಮತ್ತು ಪುಸ್ತಕಗಳನ್ನು ನೀಡುತ್ತೇವೆ’ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!