ದೆಹಲಿ ಗಲಭೆ ಪ್ರಕರಣ: ಆರೋಪಿ JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಗಲಭೆ ಪ್ರಕರಣದ ಆರೋಪಿ JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಕರ್ಕರ್‌ದೂಮ ನ್ಯಾಯಾಲಯ ಬುಧವಾರ ಮಧ್ಯಂತರ ಜಾಮೀನು ನೀಡಿದೆ.

ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದು ನ್ಯಾಯಾಲಯ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಉಮರ್ ಖಾಲಿದ್ ನನ್ನು 4 ವರ್ಷಗಳ ಹಿಂದೆ ಬಂಧಿಸಲಾಗಿತ್ತು. ಉಮರ್ ಖಾಲಿದ್ ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಸೇರಿದಂತೆ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ.

ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯನ್ನು ಈಗಾಗಲೇ ಕೆಳ ನ್ಯಾಯಾಲಯವು ತಿರಸ್ಕರಿಸಿತ್ತು. ಅದರ ನಂತರ ಉಮರ್ ಖಾಲಿದ್ ಪರವಾಗಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ವೇಳೆ ಕೆಳ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಒಮರ್‌ಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿತ್ತು.

ಉಮರ್ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಇದಲ್ಲದೇ ಇನ್ನೂ ಹಲವು ಪ್ರಕರಣಗಳು ದಾಖಲಾಗಿವೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!