ಹೊಸದಿಗಂತ ಡಿಜಿಟಲ್ ಡೆಸ್ಕ್
2020ರ ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಉಮರ್ ಖಾಲಿದ್ ಅವರನ್ನು ದೆಹಲಿ ಕರ್ಕರ್ಡೂಮಾ ನ್ಯಾಯಾಲಯ ಇಂದು ದೋಷಮುಕ್ತಗೊಳಿಸಿದೆ.
ಉಮರ್ ಖಾಲಿದ್ ಜೊತೆಗೆ ಮತ್ತೊಬ್ಬ ವಿದ್ಯಾರ್ಥಿ ನಾಯಕರಾದ ಖಾಲಿದ್ ಸೈಫಿ ಕೂಡ ಖುಲಾಸೆಗೊಂಡಿದ್ದಾರೆ.
ದೆಹಲಿಯ ಚಾಂದ್ಬಾಗ್ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರಿಗೂ ಜಾಮೀನು ಸಿಕ್ಕಿತ್ತು. ಆದರೆ ಬೇರೆ ಪ್ರಕರಣದಲ್ಲಿ ಜೈಲು ಸೇರಿದ್ದರು.