ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸಿಲಿಕಾನ್ ಸಿಟಿಯಮಾಗಡಿ ರಸ್ತೆಯ ಟೋಲ್ ಗೇಟ್ (Magadi Road Toll Plaza) ಬಳಿ ಬೈಕ್ ಹಿಡಿದ ಕಾರು ಚಾಲಕನನ್ನು ಬೈಕ್ ಸವಾರನೊಬ್ಬ ಒಂದೂವರೆ ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಅಮಾನವೀಯ ಕೃತ್ಯ ನಡೆದಿದೆ.
ಟೋಲ್ ಗೇಟ್ ಬಳಿ ಟಾಟಾ ಸುಮೋಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದು, ಇದನ್ನು ಪ್ರಶ್ನಿಸಲು ಹೋದಾಗ ಬೈಕ್ ಸವಾರ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾರು ಚಾಲಕ ಬೈಕ್ ಹಿಂಭಾಗ ಹಿಡಿದಿದ್ದು, ಸವಾರ ಆ ವ್ಯಕ್ತಿಯನ್ನು ಒಂದೂವರೆ ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದಿದ್ದಾನೆ.
ಈ ದುರ್ಘಟನೆ ದೆಹಲಿಯ ಹಿಟ್ ಅಂಡ್ ರನ್ ಕೇಸನ್ನೇ ನೆನಪಿಸುವಂತಿದೆ.
ವಯಸ್ಸಾದ ಚಾಲಕನನ್ನು ಕ್ಯಾರೇ ಅನ್ನದ ರೀತಿ ಬೈಕ್ನಲ್ಲಿ ಎಳೆದೊಯ್ತುತ್ತಿರುವುದನ್ನು ನೋಡಿದ ಇತರೆ ವಾಹನ ಸವಾರರು ಬೈಕ್ ಅನ್ನು ಅಡ್ಡಹಾಕಿ ಪ್ರಶ್ನಿಸಿ ಧರ್ಮದೇಟು ನೀಡಿದ್ದಾರೆ.
ಬೈಕಿನ ಹಿಂದೆ ನೇತುಬಿದ್ದು ಒಂದೂವರೆ ಕಿಮೀ ಎಳೆದೊಯ್ತಲ್ಪಟ್ಟ ಟಾಟಾಸುಮೋ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರನನ್ನು ಬ್ಯಾಟರಾಯನಪುರ ನಿವಾಸಿ ಸುಹೇಲ್ ಅಲಿಯಾಸ್ ಸಾಹಿಲ್ ಸೈಯದ್ ಎಂದು ಗುರುತಿಸಲಾಗಿದ್ದು, ಸೇಲ್ಸ್ಮನ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ನಡೆಸಿದ ವಿಚಾರಣೆ ವೇಳೆ ತಿಳಿದುಬಂದಿದೆ. ಇನ್ನು, ಮುತ್ತಪ್ಪ ಅವರ ಆರೋಗ್ಯ ವಿಚಾರಿಸಲು ವಿಜಯನಗರದ ಖಾಸಗಿ ಆಸ್ಪತ್ರೆಗೆ ವಸತಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು.