ಸರಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ: ಬಿಜೆಪಿ ಕಾರ್ಯಕರ್ತರಿಗೆ ಸುಜಾ ಕುಶಾಲಪ್ಪ ಕಿವಿಮಾತು

ಹೊಸದಿಗಂತ ವರದಿ,ಸುಂಟಿಕೊಪ್ಪ:

ಸರಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವಲ್ಲಿ ಬಿಜೆಪಿ ಕಾರ್ಯಕರ್ತರು ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ ಕಿವಿಮಾತು ಹೇಳಿದರು.
ಸುಂಟಿಕೊಪ್ಪ ಮೀನಾಕ್ಷಮ್ಮ ಮಂಜನಾಥಯ್ಯ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಯುವ ಮೋರ್ಚಾ ಸಮಿತಿಯ ವತಿಯಿಂದ ಯುವ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಯುವ ಮೋರ್ಚಾ ಮತ್ತು ಶಕ್ತಿ ಕೇಂದ್ರದ ವತಿಯಿಂದ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರಿಗೆ ಏರ್ಪಡಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತೀಯ ಜನತಾಪಕ್ಷದ ಸಂಘಟನೆಯಲ್ಲಿ ಪ್ರತಿ ಕಾರ್ಯಕರ್ತರ ಸೇವೆ ಪ್ರಮುಖವಾಗಿದೆ. ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳ ಸಹಕಾರದಿಂದ ನಾನು ಗೆಲುವು ಸಾಧಿಸಲು ಸಾಧ್ಯವಾಯಿತು. ಜನ ಸಾಮಾನ್ಯರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಈಗ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ, ಸೇವೆ ಮೂಲಕ ಪಕ್ಷದ ಸಂಘಟನೆ ಬಲಿಷ್ಠಗೊಳಿಸಬೇಕು. ಸರಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬರ ಮನೆಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು
ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಅವರಿಗೆ ಶಾಲು ಹೊದಿಸಿ, ಸಸಿ ನೀಡಿ ಗೌರವಿಸಲಾಯಿತು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಹಿರಿಯ ಕಾರ್ಯಕರ್ತ ಯಂಕನ ಕರುಂಬಯ್ಯ, ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್, ಸೋಮವಾರಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಮನು ಕುಮಾರ ರೈ, ಸೋಮವಾರಪೇಟೆ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಸುಂಟಿಕೊಪ್ಪ ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ಎಂ.ಎನ್.ಕೊಮಾರಪ್ಪ, ಬಿಜೆಪಿ ಓಬಿಸಿ ಉಪಾಧ್ಯಕ್ಷ ಬಿ.ಕೆ.ಮೋಹನ್, ಪಂಚಾಯಿತಿ ಸದಸ್ಯರಾದ ಪಿ.ಆರ್.ಸುನಿಲ್‍ ಕುಮಾರ್, ಶಾಂತಿ, ವಸಂತಿ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಭವಾನಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ವಾಸುದೇವ ಹಾಗೂ ಬಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!