ತಿರುಪತಿ ತಿಮ್ಮಪ್ಪನಿಗೆ ಡಿಮ್ಯಾಂಡೋ ಡಿಮ್ಯಾಂಡು, ದರುಶನಕ್ಕಾಗಿ ಮೂರು ಕಿ.ಮೀ. ಕ್ಯೂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶನಿವಾರ, ಭಾನುವಾರ ಹಾಗೂ ಬಕ್ರೀದ್‌ ರಜೆ ಸೋಮವಾರ ಬಂದ ಕಾರಣ ಪ್ರಸಿದ್ಧಿ ಸ್ಥಳಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ.

ರಜೆ ಹಿನ್ನೆಲೆಯಲ್ಲಿ ತಿರುಮಲದ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ದರುಶನ ಪಡೆದಿದ್ದಾರೆ. ಶನಿವಾರ ಮತ್ತು ಭಾನುವಾರ ಭಾರೀ ಜನದಟ್ಟಣೆ ಕಂಡುಬಂದಿದ್ದು, ಭಕ್ತಾದಿಗಳು ದೇವರ ದರ್ಶನಕ್ಕಾಗಿ ಸುಮಾರು 3 ಕಿ.ಮೀ.ವರೆಗೂ ಸರತಿ ಸಾಲಿನಲ್ಲಿ ನಿಂತಿದ್ದರು.

ಚುನಾವಣೆ ಮುಕ್ತಾಯ, ವಾರಾಂತ್ಯ ರಜೆ, ಬಹುತೇಕ ಪರೀಕ್ಷೆಗಳು ಮುಗಿದಿರುವುದು ಜೊತೆ ಬಕ್ರೀದ್‌ ರಜೆಯೂ ಸೇರಿದ್ದರಿಂದ ತಿರುಪತಿಗೆ ಹೆಚ್ಚಿನ ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸೋಮವಾರವೂ ಈ ದಟ್ಟಣೆ ಮುಂದುವರಿಯುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!