ರಾಜ್ಯ ಸರಕಾರದ ಭ್ರಷ್ಟತೆ ಖಂಡಿಸಿ ಕೈ ಪ್ರತಿಭಟನೆ, ಬಿಜೆಪಿ ಕಾರ್ಯಕರ್ತರಿಂದ ಪ್ರತಿರೋಧ 

ಹೊಸದಿಗಂತ ವರದಿ, ಹುಬ್ಬಳ್ಳಿ:
ರಾಜ್ಯ ಸರಕಾರ ಶೇ. 40 ಪರ್ಸಂಟೇಜ್ ಕಮಿಷನ್ ಪಡೆಯುತ್ತಿದೆ ಹಾಗೂ ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ದೇಶಪಾಂಡೆ ನಗರದ ಬಿಜೆಪಿ ಕಚೇರಿ ಎದುರು ಪ್ರತಿಭಟನೆ‌ ನಡೆಸಿದ್ದಾರೆ. ಈ ವೇಳೆ ಇದನ್ನು ಇದನ್ನು ವಿರೋಧಿಸಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪ್ರತಿರೋಧ ವ್ಯಕ್ತಪಡಿಸಿ ಘೋಷಣೆ ಕೂಗಿದರು. ಪ್ರತಿಭಟನಾಕಾರರು ತಂದಿದ್ದ ಪೋಸ್ಟರ್ ಗಳನ್ನು ಹರಿದು ಹಾಕಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಗುತ್ತಿಗೆ ದಾರರ ಸಾವಿಗೆ ಕಾರಣವಾದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಘೋಷಣೆ ಕೂಗಿದರೆ. ಬಿಜೆಪಿ ಕಾರ್ಯಕರ್ತರು ಭಾರತ ಮಾತಕೀ, ಸಹಸಾರ್ಜುನ ಮಾರಾಜಕೀ ಜೈ ಎಂದು ಘೋಷಣೆ ಕೂಗಿ ತಿರುಗೇಟು ನೀಡಿದರು. ಈ ಸಂದರ್ಭದಲ್ಲಿ ಕೆಲ ಕಾಲ ಉದ್ವಿಗ್ನತೆ ಉಂಟಾಗಿತು. ಉಪನಗರ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಇದರಿಂದ ಸ್ವಲ್ಪ ಸಮಯ ವಾಹನ ದಟ್ಟಣೆ ಸಹ ಉಂಟಾಗಿತು.‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!