ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಡೆಂಗ್ಯೂ ಕೇಸ್ ಹೆಚ್ಚುತ್ತಿದ್ದು, ಮುಂದುವರೆಸಿದ್ದು, ಕಳೆದ 24 ಗಂಟೆಯಲ್ಲಿ 424 ಡೆಂಗ್ಯೂ ಕೇಸ್ ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಕೇಸ್ಗಳ ಸಂಖ್ಯೆ 9,082ಕ್ಕೆ ಏರಿಕೆ ಆಗಿದೆ.
ಹಾಸನ, ಹಾವೇರಿ, ಚಿಕ್ಕಮಗಳೂರು ಕೆಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರಲ್ಲೂ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಸೊಳ್ಳೆಗಳ ಹಾವಳಿ ಹೆಚ್ಚಾಗುತ್ತಿದೆ. ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಶಂಕಿತ ಡೆಂಗ್ಯೂಗೆ ವಿದ್ಯಾರ್ಥಿ ಸಾವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಪಡ್ನೂರಿನ ಯತೀಶ್ (50) ಮೃತ ವ್ಯಕ್ತಿ. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿ. ಜು.10 ರಂದು ಯತೀಶ್ಗೆ ಜ್ವರ ಕಾಣಿಸಿಕೊಂಡಿತ್ತು. ವಿಪರೀತ ಜ್ವರದಿಂದ ಬಳಲುತ್ತಿದ್ದ ಯತೀಶ್ರನ್ನು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.