ಪಾಕ್​ ಪ್ರಜೆಗಳ ಗಡಿಪಾರು: ಪ್ರೀತಿಸಿ ಬಂದು ಮದುವೆಯಾಗಿದ್ದೇವೆ, ಕಳಿಸಬೇಡಿ ಎಂದ ಯುವತಿಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದ ದಾಳಿಯಿಂದಾಗಿ ದೇಶದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸದ್ಯ ಭಾರತದಲ್ಲಿ ನೆಲೆಸಿರುವ ಪಾಕ್‌ ಪ್ರಜೆಗಳನ್ನು ತಮ್ಮೂರಿಗೆ ಹೋಗುವಂತೆ ಭಾರತ ಸರ್ಕಾರ ಖಡಕ್‌ ವಾರ್ನಿಂಗ್‌ ನೀಡಿದೆ.

ನೆಮ್ಮದಿಯಾಗಿ ಭಾರತದಲ್ಲಿ ನೆಲೆಸಿದ್ದ ಎಷ್ಟೋ ಪಾಕ್‌ ಪ್ರಜೆಗಳಿಗೆ ಈ ಆದೇಶದಿಂದ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. ನಾವು ಪ್ರೀತಿಸಿ ಇಲ್ಲಿಗೆ ಬಂದು ಮದುವೆಯಾಗಿದ್ದೇವೆ ನಮ್ಮನ್ನು ಕಳಿಸಬೇಡಿ ಎಂದು ಪಾಕ್‌ ಪ್ರಜೆಗಳಾದ ಯುವತಿಯರು ಮನವಿ ಮಾಡಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್‌ನ ದೇವಿಕೋಟ್‌ನ ನಿವಾಸಿಗಳಾದ ಸೋದರ ಸಂಬಂಧಿಗಳಾದ ಸಲೇಹ್ ಮೊಹಮ್ಮದ್ ಮತ್ತು ಮುಷ್ತಾಕ್ ಅಲಿ, ಜುಲೈ 2023 ರಲ್ಲಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ತಮ್ಮ ಚಿಕ್ಕಮ್ಮನನ್ನು ಭೇಟಿಯಾಗಲು ಹೋಗಿದ್ದು, ಈ ವೇಳೆ ಅಲ್ಲಿನ ಕರಮ್ ಖತುನ್ (21) ಮತ್ತು ಸಚುಲ್ (22) ಎಂಬ ಇಬ್ಬರು ಯುವತಿಯರ ಪ್ರೀತಿಗೆ ಬಿದ್ದು, 2023ರ ಆಗಸ್ಟ್ ತಿಂಗಳನಲ್ಲಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಅವರನ್ನು ವಿವಾಹವಾಗಿದ್ದರು.

ಬಳಿಕ 2023ರ ಸೆಪ್ಟೆಂಬರ್ ತಿಂಗಳಿನಲ್ಲಿ ಯುವಕರು ಭಾರತಕ್ಕೆ ವಾಪಸ್ಸಾಗಲೇಬೇಕಾಗಿತ್ತು. ವಿವಾಹದ ಹೊರತಾಗಿಯೂ ಯುವತಿಯರಿಗೆ ಭಾರತಕ್ಕೆ ಬರಲು ವೀಸಾ ಸಿಕ್ಕಿರಲಿಲ್ಲ. ಸುಮಾರು ಒಂದೂವರೆ ವರ್ಷಗಳ ಕಾಯುವಿಕೆಯ ನಂತರ, ಯುವತಿಯರಿಗೆ ವೀಸಾ ಸಿಕ್ಕಿತ್ತು. ಇದರಂತೆ ಏಪ್ರಿಲ್ 11 ರಂದು ಜೈಸಲ್ಮೇರ್‌ಗೆ ಬಂದಿಳಿದು, ತಮ್ಮ ಪತಿಗಳ ಜೊತೆ ಜೀವನ ಪ್ರಾರಂಭಿಸಿದ್ದರು.

ಆದರೆ, 10 ದಿನಗಳ ನಂತರ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಈ ಜೋಡಿಗಳ ದಾಂಪತ್ಯ ಜೀವನದ ಸಂತಸವನ್ನು ಕಸಿದುಕೊಂಡಿದೆ. ಪಾಕಿಸ್ತಾನಿ ಪ್ರಜೆಗಳು ಅವರ ದೇಶಕ್ಕೆ ವಾಪಸ್ಸಾಗುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಜೋಡಿಗಳು ಸಂಕಷ್ಟ ಎದುರಿಸುವಂತಾಗಿದೆ.

ಯುವತಿಯರು ಭಾರತಕ್ಕೆ ಬಂದ ನಂತರ ಕುಟುಂಬವು ದೀರ್ಘಾವಧಿಯ ವೀಸಾಕ್ಕೆ ಆರ್ಜಿ ಸಲ್ಲಿಸಿತ್ತು. ಆದರೆ, ಇದೀಗ ಪಾಕಿಸ್ತಾನಕ್ಕೆ ಹಿಂತಿರುವ ಅನಿವಾರ್ಯತೆ ಎದುರಾಗಿದೆ. ಆಡಳಿತ ಮಂಡಳಿ ಪಾಕಿಸ್ತಾನಕ್ಕೆ ಹಿಂತಿರುಗುವಂತೆ ಆದೇಶಿಸಿದೆ. ಈ ಉದ್ವಿಗ್ನ ಸಮಯದಲ್ಲಿ ಇಬ್ಬರು ಹೇಗೆ ಹೋಗುತ್ತಾರೆಂದು ಕುಟುಂಬವು ಪ್ರಶ್ನಿಸಿದೆ.

ಉಗ್ರರ ದಾಳಿ ಬಳಿಕ ಕಠಿಣ ನಿಲುವು ತಳೆದ ಭಾರತ ಸರ್ಕಾರ, ಪಾಕಿಸ್ತಾನಿ ನಾಗರಿಕರ ವೀಸಾಗಳನ್ನು ರದ್ದುಗೊಳಿಸಿ, ಅವರನ್ನು ತಮ್ಮ ದೇಶಕ್ಕೆ ಮರಳುವಂತೆ ನಿರ್ದೇಶಿಸಿದೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!