ಹೊಸದಿಗಂತ ವರದಿ,ವಿಜಯಪುರ:
ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯಲೋಪ ಹಿನ್ನೆಲೆ ಶಿಕ್ಷಕನನ್ನು ಅಮಾನತು ಮಾಡಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಅರಕೇರಿಯ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಮುಜಮ್ಮಿಲ್ ಮುಲ್ಲಾ ಅಮಾನತುಕೊಂಡಿರುವ ಶಿಕ್ಷಕ. ಇನ್ನು ಮತಗಟ್ಟೆ ಮಟ್ಟದ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸಲು ನಿರಾಕರಣೆ ಹಿನ್ನೆಲೆ ಅಮಾನತು ಮಾಡಲಾಗಿದೆ. ಮಾ.14, 2024 ರಂದು ಕರ್ತವ್ಯಕ್ಕೆ ಹಾಜರು ಆಗುವಂತೆ ಆದೇಶ ಹೊರಡಿಸಲಾಗಿತ್ತು. ಅಂದಿನಿಂದ ಕರ್ತವ್ಯಕ್ಕೆ ಹಾಜರಾಗದೇ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಿ ಅವರು ಆದೇಶಿಸಿದ್ದಾರೆ.