ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ: ಜಿಲ್ಲಾ ಬಿಜೆಪಿಯಿಂದ ಎಸ್.ಪಿ.ಗೆ ದೂರು

ಹೊಸದಿಗಂತ ವರದಿ ಮಡಿಕೇರಿ:

ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆ ಮತ್ತು ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಸಂದೇಶ ಪೋಸ್ಟ್‌ ಮಾಡಿರುವ ಅನ್ಯಧರ್ಮದ ವ್ಯಕ್ತಿಯನ್ನು ಕೂಡಲೇ ಬಂಧಿಸುವಂತೆ ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರನ್ನು ಸೋಮವಾರ ಭೇಟಿ ಮಾಡಿ ದೂರು ಸಲ್ಲಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಯಿತು.

ಈ ಸಂದರ್ಭ ಪ್ರತಿಕ್ರಿಯಿಸಿದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಕೊಡಗು ಅತಿ ಸೂಕ್ಷ್ಮ ಪ್ರದೇಶವಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ. ಎರಡು ಮೂರು ದಿನಗಳಲ್ಲಿ ಸಂಬಂಧಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗುವುದಲ್ಲದೆ ಸೂಕ್ತ ಸಾಕ್ಷ್ಯ ಸಂಗ್ರಹಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!