ಹೊಸದಿಗಂತ ಹುಬ್ಬಳ್ಳಿ:
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮರಾಠ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಬುಧವಾರ ನಗರದ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ಸಮಾಜದ ಮುಖಂಡರು, ದಲಿತ ಪರ ಸಂಘಟನೆ ಹಾಗೂ ಸಂತೋಷ ಲಾಡ್ ಅಭಿಮಾನಿಗಳು ಬಿ.ವೈ. ವಿಜಯೇಂದ್ರ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಚನ್ನಮ್ಮ ವೃತ್ತದಿಂದ ಮಿನಿವಿಧಾನ ಸೌಧದ ವರಗೆ ಪ್ರತಿಭಟನಾ ಮೆರವಣೆಗೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸಚಿವ ಸಂತೋಷ ಲಾಡ್ ಅವಾಚ್ಯ ಶಬ್ದಗಳನ್ನು ಬಳಸಿ ಅವರಿಗೆ ಅಗೌರವ ತೊರಿದ್ದಾರೆ. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಮಾನಿಸಿದ್ದಾರೆ ಎಂದು ಅಸಮಾಧಾನ ಖಂಡಿಸಿದರು.