ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಅರೋಪದಲ್ಲಿ ತಮಿಳುನಾಡಿನ ಮೀನುಗಾರಿಕಾ ಸಚಿವ ಅನಿತಾ ಆರ್. ರಾಧಾಕೃಷ್ಣನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಿಜೆಪಿಯ ತೂತುಕುಡಿ ದಕ್ಷಿಣ ಜಿಲ್ಲಾ ಅಧ್ಯಕ್ಷ ಆರ್. ಸಿದ್ದರಂಗನಾಥನ್ ಅವರ ದೂರಿನ ಮೇರೆಗೆ ಮೇಗ್ನಾನಪುರಂ ಪೊಲೀಸ್ ಠಾಣೆಯಲ್ಲಿ ರಾಧಕೃಷ್ಣನ್ ವಿರುದ್ ಐಪಿಸಿಯ ಸೆಕ್ಷನ್ 294ಬಿ ಅಡಿ ದೂರು ದಾಖಲಾಗಿದೆ.
ಮಾರ್ಚ್ 22ರಂದು ತೂತುಕುಡಿ ಜಿಲ್ಲೆಯ ತಂಡಪತು ಎಂಬಲ್ಲಿ ನಡೆದ ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ, ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು.