ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಪಂಚ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅದರಲ್ಲಿ ಪ್ರಮುಖ ಸಿಂಧೂ ನದಿ ನೀರನ್ನು ಪಾಕಿಸ್ತಾನ ಬಿಡುವುದನ್ನು ಸ್ಥಗಿತಗೊಳಿಸಿದ್ದು, ಇದೀಗ ಈ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪಾಕ್ ತಕರಾರು ಎತ್ತಿದೆ.
ಆದರೆ ಇದಕ್ಕೆ ಭಾರತ ಸರಿಯಾಗಿ ಉತ್ತರವನ್ನು ನೀಡಿದೆ. ಭಾರತ ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾತ್ರವಲ್ಲದೆ ಅನೇಕ ಉದಾಹರಣೆಗಳನ್ನು ನೀಡಿ. ಹಾಗೂ ಭಯೋತ್ಪಾದನೆ ದಾಳಿ ಭಾರತದ ಜತೆಗೆ ಮಾಡಿಕೊಂಡ ಹಲವು ಒಪ್ಪಂದವನ್ನು ಉಲ್ಲಂಘನೆ ಮಾಡಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ತಿಳಿಸಿದೆ.
ಭಾರತ ಸಿಂಧೂ ಒಪ್ಪಂದವನ್ನು ಮುರಿದಿಲ್ಲ, ಪಾಕ್ ಮಾಡುತ್ತಿರವ ಭಯೋತ್ಪಾದನ ದಾಳಿಯಿಂದ ಈ ಒಪ್ಪಂದವನ್ನು ಮುರಿದುಕೊಂಡಿದೆ. ಇತ್ತೀಚಿನ ಪಹಲ್ಗಾಮ್ ದಾಳಿಯು ಇತ್ತೀಚಿನ ಉದಾಹರಣೆಯಾಗಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಹೇಳಿದ್ದಾರೆ.