ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವರಾಜೇಗೌಡ ಆರೋಪ ಆಧಾರಹಿತ, ಆತನಿಗೆ ತಲೆ ಕೆಟ್ಟಿದೆ. ಆತನ ಆರೋಪಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಕೆಶಿ 100 ಕೋಟಿ ಆಫರ್ ಮಾಡಿದ್ದರು ಎಂದು ದೇವರಾಜೇಗೌಡ ಅವರ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದ ಅವರು, ನಾನು 100 ಕೋಟಿ ರೂ. ಆಫರ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ಕೊಡಲಿ. ರಾಷ್ಟ್ರೀಯ, ರಾಜ್ಯ ಮಾಧ್ಯಮಗಳು ಆರೋಪಿಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬಾರದು ಎಂದರು.
ಅವ್ನು ಏನ್ ಬೇಕಾದರೂ ಮಾತನಾಡಿಕೊಳ್ಳಲಿ. ದೇವರಾಜೇಗೌಡಗೆ ತಲೆ ಕೆಟ್ಟಿದೆ. ನಾನು ಯಾರ ಜೊತೆಯಲ್ಲೂ ಮಾತನಾಡಿಲ್ಲ. ನನ್ನ ಹತ್ತಿರ ಯಾವುದಕ್ಕೂ ನೂರಾರು ಜನ ಬರುತ್ತಿರುತ್ತಾರೆ. ಬರುವವರನ್ನು ಸ್ಕ್ಯಾನ್ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದರು.
ಕೆಲವರಿಗೆ ನನ್ನ ಹೆಸರನ್ನ ಉಪಯೋಗಿಸಿಕೊಂಡು ಮಾರ್ಕೆಟ್ ಮಾಡಿಕೊಕೊಳ್ಳುತ್ತಾರೆ. ಏನಾದ್ರೂ ಒಳ್ಳೆಯದು ಇದ್ದರೆ ಹೇಳಿ. ಯಾರ್ಯಾರೋ ಹೇಳಿದ್ರೆ ನಾನು ತಲೆ ಕೆಡಿಸಿಕೊಳ್ಳಲು ಹೋಗಲ್ಲ ಎಂದರು.
ಎಲ್ಲರೂ ಪೆನ್ ಡ್ರೈವ್ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಸಂತ್ರಸ್ತೆಯರ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಯಾಕೆ? ಈ ವಿಚಾರದಲ್ಲಿ ನಾನು ಹೆಚ್ಚು ಏನೂ ಮಾತನಾಡುವುದಿಲ್ಲ ಎಂದು ಹೇಳಿದರು.