ದೇವೇಗೌಡರ ಸಭೆ ಅಂತ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕುರಿತು ಬಿರುಸಿನ ಚರ್ಚೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಲೋಕಸಭಾ (Mandya LokaSaba) ಕ್ಷೇತ್ರ ಬಹುತೇಕ ಜೆಡಿಎಸ್​ ಪಾಲಾಗುವುದು ಬಹುತೇಕ ಖಚಿತವಾಗಿದೆ.

ಇಂದು ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ (HD Devegowda)ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರ ಸಭೆ ನಡೆಸಿದ್ದು, ಅಭ್ಯರ್ಥಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಲ್ಲದೇ ಯಾರು ಅಭ್ಯರ್ಥಿಯಾದರೆ ಹೇಗೆ ಎನ್ನುವ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕುಮಾರಸ್ವಾಮಿ, ನನಗೆ( ದೇವೇಗೌಡ) ನಿಖಿಲ್​ಗೆ ಒತ್ತಾಯವಿದೆ. ಆದ್ರೆ, ನಾನು ಸ್ಪರ್ಧಿಸಲ್ಲ ಎಂದು ಹೇಳಿದ್ದೇನೆ. ಹಾಗೇ ಈಗಾಗಲೇ ನಿಖಿಲ್ ಸಹ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಓಡಾಡಿ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಕಾರ್ಯಕರ್ತರೊಂದಿಗೆ ಸಭೆ ಮಾಡಿ ಮಾತಾಡಿದ್ದಾರೆ. ಈ ಸಭೆಯಲ್ಲಿ ನಾವು ಮೂವರಲ್ಲಿ ಒಬ್ಬರು ನಿಲ್ಲಿ ಅಂದಿದ್ದಾರೆ. ಆದ್ರೆ, ನಾನು ನಿಲ್ಲಲ್ಲ. ನಿಖಿಲ್ ಕೂಡ ನಿಲ್ಲಲ್ಲ. ಕುಮಾರಸ್ವಾಮಿ ಅವರು ಇವತ್ತು ಸಭೆಯಲ್ಲಿ ಇರಲಿಲ್ಲ. ಅಂತಿಮವಾಗಿ ಲೋಕಸಭೆ ಬಗ್ಗೆ ನಾವು ಒಂದು ಅಭಿಪ್ರಾಯ ತಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಅಭ್ಯರ್ಥಿ ಕುರಿತು ಅಭಿಪ್ರಾಯ ಸಂಗ್ರಹಿಸಿ, ನಮ್ಮ ಅಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಅಂತಿಮವಾಗಿ ನರೇಂದ್ರ ಮೋದಿ, ಜೆಪಿ ನಡ್ಡಾ, ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

ಮಂಡ್ಯ ಕ್ಷೇತ್ರದ ಎಂಟು ಕ್ಷೇತ್ರದಲ್ಲೂಓಡಾಟ ನಡೆಸುತ್ತೇವೆ. ಇಲ್ಲಿ ಜೆಡಿಎಸ್- ಬಿಜೆಪಿ ಪ್ರಶ್ನೆ ಅಲ್ಲ. ಎನ್​ಡಿಎದಲ್ಲಿ ನಾವು ಇದ್ದೇವೆ. ಅಂತಿಮವಾಗಿ ಮೋದಿ,ನಡ್ಡಾ ಕುಮಾರಸ್ವಾಮಿ,ಯಡಿಯೂರಪ್ಪ ಎಲ್ಲರೂ ಸಮಾಲೋಚನೆ ಮಾಡಿ ತೀರ್ಮಾನ ಮಾಡುತ್ತಾರೆ. ರೇವಣ್ಣ ಎಂದು ಲೋಕಸಭೆಗೆ ಹೋಗುತ್ತೇನೆ ಎಂದು ಹೇಳಿಲ್ಲ. ಇದು ಮಾಧ್ಯಮದವರ ಸೃಷ್ಟಿ. ನಾವು ಮೂರು ಜನ ಒಗ್ಗಟ್ಟಾಗಿ ಹೋಗುತ್ತೇವೆ. ಮಂಡ್ಯದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ. ನಂತರ ನಾವು ನಮ್ಮ ಅಭಿಪ್ರಾಯವನ್ನು ತಿಳಿಸುತ್ತೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!