ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರತ್ನ ರಥಯಾತ್ರೆಯ ಸಮಾರೋಪದ ಭಾಗವಾಗಿಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ (HD Devegowda) ನೇತೃತ್ವದಲ್ಲಿ ನಡೆಯಬೇಕಿದ್ದ 100 ಕಿ.ಮೀ ರೋಡ್ ಶೋ ರದ್ದುಗೊಳಿಸಲಾಗಿದೆ.
ವೈದ್ಯರ ಸಲಹೆ ಮೇರೆಗೆ ದೇವೇಗೌಡರ ರೋಡ್ ಶೋ ರದ್ದುಗೊಳಿಸಿರುವುದಾಗಿ ಜೆಡಿಎಸ್ ತಿಳಿಸಿದೆ. ಕೇವಲ ಸಮಾರೋಪ ಸಮಾರಂಭ ಮಾಡಲು ನಿರ್ಧರಿಸಲಾಗಿದೆ ಎಂದು ಪಕ್ಷ ಮಾಹಿತಿ ನೀಡಿದೆ.
ರೋಡ್ ಶೋ ರದ್ದುಗೊಳಿಸಿರುವ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವೈದ್ಯರ ಸಲಹೆ ಮೇರೆಗೆ 100 ಕಿಮೀ ರೋಡ್ ಶೋ ರದ್ದು ಮಾಡಲಾಗಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ. ವೈದ್ಯರು ಈ ಸಮಯದಲ್ಲಿ ಇಷ್ಟು ದೊಡ್ಡ ರೋಡ್ ಶೋ ಬೇಡ ಅಂತಾ ಹೇಳಿದ್ದಾರೆ. ಹೀಗಾಗಿ ರೋಡ್ ಶೋ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಮಾವೇಶ ಜಾಗದಲ್ಲಿ 2ರಿಂದ 3 ಕಿ.ಮೀ ರೋಡ್ ಶೋ ಮಾಡ್ತೀವಿ ಅಷ್ಟೆ. ಮೈಸೂರಿನಲ್ಲಿ ನಿಗದಿಯಂತೆ ಸಮಾರಂಭ ಸಮಾರಂಭ ನಡೆಯುತ್ತದೆ ಎಂದು ಹೇಳಿದ್ದಾರೆ.