ಸಿದ್ದು, ಡಿಕೆಶಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರವೇಶಿಸುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ ಕೂಗಿದ ಭಕ್ತರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು.

ಕಾಂಗ್ರೆಸ್ ಆಡಳಿತ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭೇಟಿ ಕೊಟ್ಟ ಸಿಎಂ ಹಾಗೂ ಡಿಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಾಥ್ ನೀಡಿದರು. ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖಂಡರು ನಂತರ ರಸ್ತೆ ಮಾರ್ಗವಾಗಿ ದೇವಸ್ಥಾನ ತಲುಪಿದರು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿಎಂ ಹಾಗೂ ಡಿಕೆಶಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ವೀರೇಂದ್ರ ಹೆಗ್ಗಡೆ ಸಹೋದರ ಹಷೇರ್ಂದ್ರ ಹೆಗ್ಗಡೆ ಕ್ಷೇತ್ರದ ಪರವಾಗಿ ಸ್ವಾಗತಿಸಿದರು. ನಂತರ ಸಿಎಂ, ಡಿಸಿಎಂ ಹಾಗೂ ಅರ್ಚಕರು ಮುಖ್ಯ ದ್ವಾರದ ಮೂಲಕ ದೇವಾಲಯ ಪ್ರವೇಶಿಸಿದರು. ಸಿಎಂ ಸಿದ್ದರಾಮಯ್ಯ ದೇವಸ್ಥಾನ ಪ್ರವೇಶಿಸುತ್ತಿದ್ದಂತೆಯೇ ನೆರೆದಿದ್ದ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಇದೇ ವೇಳೆ ಆಪ್ ಕಿ ಬಾರ್ ಮೋದಿ ಸರ್ಕಾರ್ ಎಂದು ಘೋಷಣೆ ಕೂಗಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!