ಹೊಸದಿಗಂತ ವರದಿ ಮಡಿಕೇರಿ:
ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಭಕ್ತರ ಟಿ.ಟಿ.ವಾಹನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ವೀರಾಜಪೇಟೆ ಸಮೀಪದ ಮಾಕುಟ್ಟದಲ್ಲಿ ನಡೆದಿದೆ.
ಕರ್ನಾಟಕದ ಗಡಿ ಭಾಗವಾದ ಮಾಕುಟ್ಟ ಅರಣ್ಯ ಪ್ರದೇಶದ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ.ವಾಹನ ಸುಮಾರು 20 ಅಡಿ ಪ್ರಪಾತಕ್ಕೆ ಸಾಗಿ ಬೃಹತ್ ಮರಕ್ಕೆ ಡಿಕ್ಕಿಯಾಗಿದೆ.
ಈ ಸಂದರ್ಭ ವಾಹನದಲ್ಲಿದ್ದ ಆಂಧ್ರ ಮೂಲದ 13 ಅಯ್ಯಪ್ಪ ಭಕ್ತರ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೇರಳದ ಇರಿಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.