ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ ವಾಪಾಸಾಗುತ್ತಿದ್ದ ಕಾರು ಅಪಘಾತವಾಗಿದೆ. ಸರಣಿ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಟಾ ಏಸ್ ವಾಹನದಲ್ಲಿ ತಿರುವಣ್ಣಾಮಲೈ ಅಣ್ಣಾಮಲೈಯಾರ್ ದೇವಾಲಯಕ್ಕೆ ತೆರಳಿದ್ದು, ದರ್ಶನ ಮುಗಿಸಿ ವಾಪಾಸಾಗುವ ವೇಳೆ ಅಪಘಾತ ಸಂಭವಿಸಿದೆ. ಎರಡು ಕಾರ್ಗಳ ಮಧ್ಯೆ ಮತ್ತೊಂದು ಕಾರ್ ಸಿಕ್ಕಿಹಾಕಿಕೊಂಡಿದೆ. ಈ ಕಾರ್ನಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.