ಮಧೂರು ದೇವಾಲಯಕ್ಕೆ ಮಲಬಾರ್ ದೇವಸ್ವಂ ಮಂಡಳಿಯ ಅಧ್ಯಕ್ಷ ಭೇಟಿ

ಹೊಸದಿಗಂತ ವರದಿ ಕಾಸರಗೋಡು:

ಇತಿಹಾಸ ಪ್ರಸಿದ್ಧ ಕುಂಬಳೆ ಸೀಮೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ, ಮಲಬಾರ್ ದೇವಸ್ವಂ ಬೋರ್ಡ್ ನ ಅಧ್ಯಕ್ಷ ಎಂ.ಆರ್.ಮುರಳಿ, ಏರಿಯಾ ಸಮಿತಿ ಅಧ್ಯಕ್ಷ ಕೊಟ್ಟಾರ ವಾಸುದೇವನ್ ನಾಯರ್, ಅಸಿಸ್ಟೆಂಟ್ ಕಮಿಷನರ್ ವಿನೋದ್ ಮುಂತಾದವರು ಭೇಟಿ ನೀಡಿ ಶ್ರೀ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಧೂರು ದೇವಾಲಯದ ನವೀಕರಣ ಸಮಿತಿಯ ಅಧ್ಯಕ್ಷ ಯು.ಟಿ.ಆಳ್ವ, ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಮಂಜುನಾಥ ಕಾಮತ್ ಕಾಸರಗೋಡು, ಕಾರ್ಯದರ್ಶಿ ಮುರಳಿ ಗಟ್ಟಿ, ಕೇರಳ ಕ್ಷೇತ್ರ ಸಂರಕ್ಷಣಾ ಸಮಿತಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಅಪ್ಪಯ್ಯ ನಾಯ್ಕ್ ಮಧೂರು, ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ, ಕಾರ್ಯನಿರ್ವಹಣಾಧಿಕಾರಿ ಎಂ.ಬಾಬು, ಪ್ರಮುಖರಾದ ಕೆ.ಗಿರೀಶ್, ಕೆ.ಜಗದೀಶ್ ಕೂಡ್ಲು, ದೇವಸ್ಥಾನದ ಸಿಬ್ಬಂದಿ ವರ್ಗದವರು, ಭಕ್ತಜನರು ಮೊದಲಾದವರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!