ಧರ್ಮಸ್ಥಳ ಗ್ರಾಮದ ಶವಗಳ ಶೋಧ ಪ್ರಕರಣ: ಎಸ್‌ಐಟಿ ತನಿಖಾ ವರದಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖಾ ವರದಿಯನ್ನು ಬುಧವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ಮಧ್ಯಾಹ್ನ ನ್ಯಾಯಾಲಯಕ್ಕೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ತನಿಖೆಯ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಸುಮಾರು 7 ಸಾವಿರಕ್ಕೂ ಅಧಿಕ ಪುಟಗಳ ಈ ಅಂತಿಮ ವರದಿ ಜೊತೆಗೆ ದಾಖಲೆಗಳು, ಸಾಕ್ಷ್ಯಗಳು ಹಾಗೂ ವಿಡಿಯೊ ದಾಖಲಾತಿಗಳನ್ನು ಒಳಗೊಂಡ ಹಾರ್ಡ್‌ಡಿಸ್ಕ್‌ನ್ನೂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು … Continue reading ಧರ್ಮಸ್ಥಳ ಗ್ರಾಮದ ಶವಗಳ ಶೋಧ ಪ್ರಕರಣ: ಎಸ್‌ಐಟಿ ತನಿಖಾ ವರದಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ