Wednesday, September 3, 2025

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದೆ ತನಿಖೆಗೆ ಹಾಜರಾದ ಯೂಟ್ಯೂಬರ್ ಅಭಿಷೇಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಕೆಲವೊಂದು ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿ ಯೂಟ್ಯೂಬರ್ ಅಭಿಷೇಕ್ ಬುಧವಾರ ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಅಭಿಷೇಕ್ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಶವ ಹೂತಿಟ್ಟ ಪ್ರಕರಣ ಹಾಗೂ ಸುಜಾತ ಭಟ್ ಪ್ರಕರಣದ ಬಗ್ಗೆ ಹಲವಾರು ವಿಡಿಯೋ ಮಾಡಿ ಪ್ರಸಾರ ಮಾಡಿದ್ದ. ಈ ವಿಚಾರದಲ್ಲಿ ವಿಚಾರಣೆಗಾಗಿ ಆತನಿಗೆ ನೋಟೀಸ್ ನೀಡಿದ್ದು, ಅದರಂತೆ ಅಭಿಷೇಕ್ ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ