ಹೊಸ ದಿಗಂತ ವರದಿ, ಹುಬ್ಬಳ್ಳಿ:
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಲು ಆಗ್ರಹಿಸಿ ಸೆ. 20 ರಂದು ಬೆಳಿಗ್ಗೆ 9 ಗಂಟೆಗೆ ಶಿಗ್ಗಾಂವಿ ಚೆನ್ನಮ್ಮ ವೃತ್ತದಿಂದ ಮುಖ್ಯ ಮಂತ್ರಿಯವರ ಮನೆಯವರೆ ಪಾದಯಾತ್ರೆ ಮೂಲಕವಾಗಿ ಹೋಗಿ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಾಗಿದೆ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮ ಸಾಲಿ ಜಗದ್ಗುರು ಬಸವ ಜಯಮುತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ನೀಡುವಂತೆ ಮುಖ್ಯ ಮಂತ್ರಿಯವರಿಗೆ ನಾಲ್ಕು ಬಾರಿ ಮನವಿ ಸಲ್ಲಿಸಲಾಗಿದೆ. ಸರ್ಕಾರವು ಸ್ಪಂದಿಸಿಲ್ಲ. ಸ್ಪಂದಿಸದಿದ್ದರೆ ಅವರ ಮನೆಯ ಮುಂದೆ ಧರಣಿ ಮಾಡುತ್ತೇವೆ ಎಂದು ಗಡುವು ನೀಡಲಾಗಿತ್ತು. ಈಗ ಗಡುವು ಮುಗಿದಿದ್ದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದರು.
ಕಳೆದರೆಡು ವರ್ಷದಿಂದ ಹೋರಾಟ ಮಾಡಲಾಗುತ್ತಿದೆ. ಶಿವಮೊಗ್ಗ, ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ಬೃಹತ್ ಪಾದಯಾತ್ರೆ ಮಾಡಲಾಗಿದೆ. ಈ ಬೃಹತ್ ಧರಣಿ ಸತ್ಯಾಗ್ರಹದಲ್ಲಿ 1 ಲಕ್ಷ ಜನರು ಭಾಗವಹಿಸುವ ಸಾಧ್ಯತೆಗಳಿವೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ