ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡ ಜಿಲ್ಲೆ ಪ್ರವೇಶ ಕೋರಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.
ಜನಪ್ರತಿನಿಧಿಯಾಗಿರುವ ಹಿನ್ನಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿದ್ದರು.ಜನವರಿ 17 ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಇದಕ್ಕೂ ಮೊದಲು ಚುನಾವಣೆ ಸ್ಪರ್ಧಿಸಿದ್ದಾಗ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು.
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್ಗೆ ಮನವಿ ಸಲ್ಲಿಸಿದರೂ ಕುಲಕರ್ಣಿಗೆ ಅನುಮತಿ ಸಿಗುತ್ತಿಲ್ಲ.
ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿತ್ತು. ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದೆ.