ಹೊಸದಿಗಂತ ವರದಿ,ಧಾರವಾಡ:
ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಯನ್ನು ಮಾ.12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸುವರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ತಾಲೂಕಿನ ಮುಮ್ಮಿಗಟ್ಟಿ ಬಳಿ ನಿರ್ಮಿಸಿದ ಐಐಟಿ ನೂತನ ಕಟ್ಟಡದ ಕಾಮಗಾರಿ ಹಾಗೂ ಮೋದಿ ಕಾರ್ಯಕ್ರಮದ ವೇದಿಕೆ, ಪೂರ್ವಸಿದ್ಧತೆ ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅಮೃತ ದೇಸಾಯಿ, ಸಿ.ಎಂ. ನಿಂಬಣ್ಣವರ, ಮೇಯರ್ ಈರೇಶ ಅಂಚಟಗೇರಿ, ಬಿಜಿಪಿ ಜಿಲ್ಲಾಧ್ಯಕ್ಷರಾದ ಬಸವರಾಜ ಕುಂದಗೋಳಮಠ, ಸಂಜಯ ಕಪಟಕರ, ಲಿಂಗರಾಜ ಪಾಟೀಲ, ರಾಜು ಕೋಟ್ಯಾನವರ, ತವನಪ್ಪ ಅಷ್ಟಗಿ ಇದ್ದರು.