ಅಭಿಮಾನಿಗಳೂ ಬಯಸಿದ್ರೂ ಧೋನಿ ಟೀಂ ಇಂಡಿಯಾ ಕೋಚ್ ಆಗಲು ಸಾಧ್ಯವಿಲ್ಲ: ಇದಕ್ಕಿದೆ ಕಾರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಟೀಮ್​ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಬಹುತೇಖ ಖಚಿತ ಎನ್ನಲಾಗಿದೆ. ಅಧಿಕೃತ ಘೋಷಣೆಯೊಂದು ಮಾತ್ರ ಬಾಕಿ ಉಳಿದಿದೆ.

ಈ ಮಧ್ಯೆ ಭಾರತಕ್ಕೆ 2 ವಿಶ್ವಕಪ್​ ಗೆದ್ದ ಮಹೇಂದ್ರ ಸಿಂಗ್​ ಧೋನಿ ಕೋಚ್​ ಆದರೆ ಉತ್ತಮ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಧೋನಿ ಕೋಚ್ ಹುದ್ದೆಗೆ ಅನರ್ಹರು ಎಂದು ತಿಳಿದುಬಂದಿದೆ.

ಬಿಸಿಸಿಐ(BCCI) ನಿಯಮಗಳ ಪ್ರಕಾರ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರಬೇಕು. ಧೋನಿ ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೂ ಕೂಡ ಅದು ಅನರ್ಹಗೊಳ್ಳಲಿದೆ.

ಧೋನಿ ಎಲ್ಲ ಕ್ರಿಕೆಟ್​ ವಿದಾಯ ಹೇಳಿದರೆ ಅವರು ಕೂಡ ಕೋಚ್​ ಹುದ್ದೆಗೆ ಅರ್ಹರಾಗಿತ್ತಾರೆ. 2021 ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ 20 ವಿಶ್ವಕಪ್‌ನಲ್ಲಿ ಎಂಎಸ್ ಧೋನಿ ಭಾರತ ತಂಡಕ್ಕೆ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು.

ಈ ಬಾರಿಯ ಐಪಿಎಲ್​ ಬಳಿಕ ಧೋನಿ ನಿವೃತ್ತಿ ಹೊಂದುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮೂಲಗಳ ಪ್ರಕಾರ ಧೋನಿ ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿಯೂ ಆಡುತ್ತಾರೆ ಎನ್ನಲಾಗಿದ್ದು ಇದೇ ಕಾರಣಕ್ಕೆ ಅವರು ನಿವೃತ್ತಿ ಘೋಷಿಸಿಲ್ಲ ಎನ್ನಲಾಗಿದೆ.

2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಆರಂಭಿಕ ಹಂತದಲ್ಲಿ ಯೋಚಿಸಿತ್ತು. ಆದರೆ ಅನೇಕ ವಿದೇಶಿ ಆಟಗಾರರು ಕೋಚ್​ ಆಗಲಿ ಆಸಕ್ತಿ ಹೊಂದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿಸಿಸಿಐ ದೇಶೀಯ ಆಟಗಾರರ ಮೊರೆ ಹೋದಂತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!