ಹೊಸದಿಗಂತ ಡಿಜಿಟಲ್ ಡೆಸ್ಕ್
ಇಂದು ನಡೆಯುವ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಟಾಸ್ ಗೆದ್ದು ಬೌಲಿಂಗ್ ಆರಿಸಿಕೊಂಡಿದೆ.
ಆಡಿರುವ 8 ಪಂದ್ಯಗಳಲ್ಲಿ ಸತತವಾಗಿ 5 ರಲ್ಲಿ ಗೆಲುವು ಕಂಡಿದ್ದ ಹೈದರಾಬಾದ್ನ ಗೆಲುವಿನ ಓಟಕ್ಕೆ ಗುಜರಾತ್ ಟೈಟಾನ್ಸ್ ಬ್ರೇಕ್ ಹಾಕಿತ್ತು. ಈ ಐಪಿಎಲ್ ಸೀಸನ್ನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಷ್ಟೇನೂ ಉತ್ತಮ ಪ್ರದರ್ಶನ ನೀಡಿಲ್ಲ.
ಇನ್ನು 4 ಬಾರಿಯ ಚಾಂಪಿಯನ್ ತಂಡವಾಗಿರುವ ಸಿಎಸ್ಕೆ ಈ ಅವತರಣಿಕೆಯಲ್ಲಿ ಕಳಪೆ ಸಾಧನೆ ಮಾಡಿದೆ. ಲೀಗ್ ಆರಂಭಕ್ಕೂ ಮುನ್ನ ಯಶಸ್ವಿ ಕ್ಯಾಪ್ಟನ್ ಆಗಿದ್ದ ಮಹೇಂದ್ರ ಸಿಂಗ್ ಧೋನಿ, ಆಲ್ರೌಂಡರ್ ರವೀಂದ್ರ ಜಡೇಜಾಗೆ ನಾಯಕತ್ವ ಬಿಟ್ಟು ಕೊಟ್ಟಿದ್ದರು. ಆದರೆ, ಇದು ಫಲ ನೀಡಲಿಲ್ಲ.
ಇದೀಗ ಸಿಎಸ್ಕೆ ತಂಡದ ಜವಾಬ್ದಾರಿ ಮತ್ತೆ ಧೋನಿ ಹೆಗಲಿಗೇ ಬಿದ್ದಿದೆ. ಉಳಿದ ಪಂದ್ಯಗಳಲ್ಲಿ ಧೋನಿ ತಂಡವನ್ನು ಮುನ್ನಡೆಸಿ ಪ್ಲೇ ಆಫ್ಗೆ ಕೊಂಡೊಯ್ಯಲಿದ್ದಾರಾ ಎಂಬುದು ಅಭಿಮಾನಿಗಳ ನಿರೀಕ್ಷೆಯಾಗಿದೆ.
ಸಿಎಸ್ಕೆ: ಋತುರಾಜ್ ಗಾಯಕ್ವಾಡ್, ಡೆವೋನ್ ಕಾನ್ವಾಯ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಮಹೇಂದ್ರ ಸಿಂಗ್ ಧೋನಿ, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಡ್ವೇನ್ ಪ್ರಿಟೋರಿಯಸ್, ಸಿಮ್ರಾಜಿತ್ ಸಿಂಗ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ.
ಹೈದರಾಬಾದ್: ಕೇನ್ ವಿಲಿಯಮ್ಸನ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡನ್ ಮಾಕ್ರಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸನ್, ಉಮ್ರಾನ್ ಮಲಿಕ್, ಟಿ. ನಟರಾಜನ್.