ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿರುವ ನಡುವೆ, ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಪ್ರತಿಕ್ರಿಯೆ ನೀಡಿದ್ದು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆ ನಡೆಸುವುದೇ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾತುಕತೆಯೇ ಪರಿಹಾರ
ಕರ್ನಾಟಕದ ಮುಖ್ಯಮಂತ್ರಿಗೆ ತಮ್ಮ ರಾಜ್ಯದ ಹಿತಾಸಕ್ತಿ ಮುಖ್ಯವಾದಂತೆ, ತಮಿಳುನಾಡಿಗೂ ತನ್ನ ಹಿತಾಸಕ್ತಿಯೇ ಮೊದಲ ಆದ್ಯತೆ ಎಂದು ಟ್ಯಾಗೋರ್ ಹೇಳಿದರು. ಕರ್ನಾಟಕ ಮತ್ತು ತಮಿಳುನಾಡು ಭಾರತ-ಪಾಕಿಸ್ತಾನದಂತಲ್ಲ, ಸಂವಾದದ ಮೂಲಕವೇ ಸಮಸ್ಯೆ ಬಗೆಹರಿಯಬೇಕು ಎಂದರು.
ಇದನ್ನೂ ಓದಿ:
ರಾಜಕೀಯದ ಮೇಲೂ ಟೀಕೆ
ಕಾವೇರಿ ವಿಚಾರದಲ್ಲಿ ಕರ್ನಾಟಕದ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ನಿಲ್ಲುತ್ತವೆ. ಆದರೆ ತಮಿಳುನಾಡಿನಲ್ಲಿ ರಾಜಕೀಯ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿದ್ದು, ಇದರಿಂದ ಅನಗತ್ಯ ರಾಜಕೀಯ ನಡೆಯುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಕುರಿತು ಹೇಳಿಕೆ
ಡಿಕೆ ಶಿವಕುಮಾರ್ ಮತ್ತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನಡುವಿನ ಮಾತುಕತೆಗೆ ಕಾಂಗ್ರೆಸ್ ಬೆಂಬಲವಿದೆ ಎಂದ ಟ್ಯಾಗೋರ್, ರಾಹುಲ್ ಗಾಂಧಿ ತಮಿಳುನಾಡಿಗೆ ಭೇಟಿ ನೀಡಿದ ಬಳಿಕ ಮಳೆಯೂ ಉತ್ತಮವಾಗಿದೆ ಎಂದು ಹಾಸ್ಯಮಿಶ್ರಿತವಾಗಿ ಹೇಳಿದರು.



