ಎಂಗೇಜ್ ಮೆಂಟ್ ವಿಚಾರದಲ್ಲಿ ನಟಿ ವೈಷ್ಣವಿ ಡಿಪ್ರೆಷನ್ ಗೆ ಹೋಗಿದ್ದಾರಾ?: ಈ ಕುರಿತು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ವಿದ್ಯಾಭರಣ್ ಜೊತೆಗಿನ ನಿಶ್ಚಿತಾರ್ಥ ಗೊಂದಲದ ಬಳಿಕ ನಟಿ ವೈಷ್ಣವಿ ಹಲವು ದಿನಗಳ ಕಾಲ ಕಾಣಿಸಿಕೊಂಡಿರಲಿಲ್ಲ. ವೈಷ್ಣವಿ ಆಚೆ ಬಾರದೇ ಇರುವ ಕಾರಣಕ್ಕಾಗಿ ಅವರು ಡಿಪ್ರೆಷನ್ ಗೆ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಈ ಕುರಿತು ವೈಷ್ಣವಿ ಮೊದಲ ಬಾರಿಗೆ ಸ್ಪಷ್ಟನೆ ನೀಡಿದ್ದಾರೆ.

ವಿದ್ಯಾಭರಣ್ ಕುರಿತಾದ ಆಡಿಯೋ ಬಹಿರಂಗವಾದಾಗ ಮನಸಿಗೆ ನೋವು ಆಗಿದ್ದು ನಿಜವಂತೆ. ಆದರೆ, ಯಾವುದೇ ಕಾರಣಕ್ಕೂ ಡಿಪ್ರೆಷನ್ ಗೆ ಹೋಗಿರಲಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಕೆಲವರು ಈ ರೀತಿಯಲ್ಲಿ ಮಾತನಾಡಿದರು. ಅದರಿಂದ ಆಚೆ ಬರುವುದಕ್ಕಾಗಿ ಟ್ಯಾಟೋ ಹಾಕಿಸಿಕೊಂಡರು ಎಂದೆಲ್ಲ ಮಾತನಾಡಿದ್ದನ್ನು ಕೇಳಿದ್ದೇನೆ. ಆದರೆ, ನಾನು ತುಂಬಾ ಸ್ಟ್ರಾಂಗ್. ನನ್ನ ಬದುಕಿಗೆ ಬಗ್ಗೆ ನನಗೆ ಸ್ಪಷ್ಟತೆ ಇದೆ ಎಂದು ಅವರು ಹೇಳಿದ್ದಾರೆ.

‘ನನ್ನ ಬದುಕಿನ ಬಗ್ಗೆ ಸ್ಪಷ್ಟತೆ ಇದೆ. ನಾನು ಗೆಲ್ಲುತ್ತೀನೋ ಅಥವಾ ಜೀವನ ಗೆಲ್ಲತ್ತೋ ನೋಡೇ ಬಿಡೋಣ’ ಎಂದೂ ಅವರು ಹೇಳಿಕೊಂಡಿದ್ದಾರೆ.

ವಿದ್ಯಾಭರಣ್ ಜೊತೆ ತಮಗೆ ನಿಶ್ಚಿತಾರ್ಥ ಆಗಿರಲಿಲ್ಲ. ಮದುವೆಗೂ ತಾವು ಒಪ್ಪಿರಲಿಲ್ಲ ಎಂದೂ ಹೇಳಿರುವ ವೈಷ್ಣವಿ ಆದ ಘಟನೆಯ ಬಗ್ಗೆ ವಿಷಾದವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಸದ್ಯ ಕೆರಿಯರ್ ಬಗ್ಗೆ ಫೋಕಸ್ ಮಾಡಿಕೊಂಡು, ಧಾರಾವಾಹಿಯನ್ನು ಅವರು ಒಪ್ಪಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!