ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಮಧ್ಯೆ, ಮೈಸೂರಿನ ವರುಣಾ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಕಾರ್ಯಕ್ರವೊಂದರಲ್ಲಿ ಭಾಗವಹಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ ಸಿದ್ದರಾಮಯ್ಯ 1 ಸಾವಿರ ರೂ. ನೀಡಿದ್ದಾರೆ ಎನ್ನಲಾಗಿದೆ. ಬಿಳುಗುಲಿ ಗ್ರಾಮದಲ್ಲಿ ಸಿದ್ದರಾಮಯ್ಯ ರೋಡ್ ಶೋ ನಡೆಸಿ ಚುನಾವಣಾ ಪ್ರಚಾರ ಮಾಡಿದ್ದಾರೆ.
ರೋಡ್ ಶೋ ಹಾಗೂ ಪುತ್ಥಳಿ ಅನಾವರಣದ ವೇಳೆ ಸಿದ್ದರಾಮುಯ್ಯಗೆ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಸುನೀಲ್ ಬೋಸ್ ಸಾಥ್ ನೀಡಿದ್ದಾರೆ.