ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲ ಸುನೀಲ್ ವಾದಕ್ಕೆ ಕಾಲಾವಕಾಶ ಕೋರಿದ್ದು, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ಬೆಂಗಳೂರು ಸೆಷನ್ಸ್ ನ್ಯಾಯಾಲಯ ಈ ತೀರ್ಪು ನೀಡಿದೆ.
ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ನಿರಾಸೆ ಅನುಭವಿಸಿದ್ದು, ವಿಚಾರಣೆಯನ್ನು ಸೆ.30ಕ್ಕೆ ನ್ಯಾಯಾಲಯ ಮುಂದೂಡಿದೆ.