ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ‘ಉತ್ತರಾಕಂಡ’ ಚಿತ್ರದಲ್ಲಿ ನಟಿಸುವುದಾಗಿ ಎಲ್ಲೆಡೆ ಸುದ್ದಿಯಾಗಿತ್ತು. ಅಭಿಮಾನಿಗಳು ಖುಷಿಪಟ್ಟಿದ್ದರು.
ಆದ್ರೆ ಇದೀಗ ‘ಉತ್ತರಕಾಂಡ’ ಸಿನಿಮಾದಲ್ಲಿ ತಾವು ನಟಿಸುತ್ತಿಲ್ಲ ಎಂಬುದನ್ನು ತಿಳಿಸಿದ್ದಾರೆ. ರಮ್ಯಾ ಅವರ ನಿರ್ಧಾರದಿಂದ ತೆರೆ ಮೇಲೆ ನಟಿಯನ್ನು ನೋಡಲು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ತುಂಬಾ ಬೇಸರವಾಗಿದೆ.
ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಈ ಸುದ್ದಿಯನ್ನು ನಟಿ ರಮ್ಯಾ ಸ್ಪಷ್ಟಪಡಿಸಿದ್ದಾರೆ. ಡೇಟ್ಸ್ ಸಮಸ್ಯೆಯಿಂದಾಗಿ ನಾನು ಉತ್ತರಕಾಂಡದಲ್ಲಿ ನಟಿಸುತ್ತಿಲ್ಲ. ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ. ಸಿನೆಮಾ ತಂಡಕ್ಕೆ ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ.
ಚಿತ್ರದ ಮುಹೂರ್ತದಲ್ಲಿ ನಟಿ ರಮ್ಯಾ ಭಾಗಿಯಾಗಿದ್ದರು. ಆದರೆ ಇದ್ದಕ್ಕಿದ್ದಂತೆ ರಮ್ಯಾ ಈ ಚಿತ್ರದಿಂದಲೂ ಹೊರಬಂದು ಅಭಿಮಾನಿಗಳಿಗೆ ಬೇಸರ ಮೂಡಿಸಿದ್ದಾರೆ. ಈ ಹಿಂದೆ ಕೂಡ ರಾಜ್ ಬಿ ಶೆಟ್ಟಿ ನಟನೆಯ “ಸ್ವಾತಿ ಮುತ್ತಿನ ಮಳೆ ಹನಿಯೇ” ಚಿತ್ರದಲ್ಲಿ ನಟಿಸುತ್ತೇನೆ ಎಂದಿದ್ದ ರಮ್ಯಾ ಆ ಚಿತ್ರದಿಂದಲೂ ಹೊರಬಂದು ಶಾಕ್ ಕೊಟ್ಟಿದ್ದರು.
ಶರತ್ ಮಂಜುನಾಥ್ ರೋಹಿತ್ ಪದಕಿ ನಿರ್ದೇಶನದಲ್ಲಿ ಉತ್ತರಾಕಂಡ ಸಿನಿಮಾ ತೆರೆಗೆ ಬರ್ತಿದ್ದು, ಡಾಲಿ ಧನಂಜಯ್ ಬರ್ತಡೇ ದಿನವೇ ಆಗಸ್ಟ್ 2022ರಲ್ಲಿ ಸಿನೆಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಕೆಆರ್ಜಿ ಸ್ಟುಡಿಯೋಸ್ ಬ್ಯಾನರ್ನಲ್ಲಿ ಉತ್ತರಕಾಂಡ ಸಿನಿಮಾ ನಿರ್ಮಾಣವಾಗಲಿದೆ. ಉತ್ತರದ ದರೋಡೆಕೋರರ ಕಥೆ ಇದಾಗಿದೆ. ನಟ ಶಿವರಾಜ್ ಕುಮಾರ್ , ಅತುಲ್ ಕುಲಕರ್ಣಿ, ದಿಗಂತ್ ಕೂಡ ಈ ಸಿನೆಮಾದಲ್ಲಿ ಬಣ್ಣ ಹಚ್ಚಲಿದ್ದಾರೆ.