ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಶನಿವಾರದಂದು ತೀವ್ರ ಜ್ವರದ ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. 3 ದಿನಗಳ ಚಿಕಿತ್ಸೆಯ ಬಳಿಕ, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದರು.
ಆಸ್ಪತ್ರೆಯಲ್ಲಿ ಇದ್ದುಕೊಂಡು ಚಿಕಿತ್ಸೆ ಪಡೆಯುತ್ತಲೇ ಚುನಾವಣಾ ರೂಪರೇಷ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದರು. ಜೆಡಿಎಸ್ ಅಭ್ಯರ್ಥಿ ಗೆಲ್ಲುವ ಪಕ್ಷಗಳ ಪಟ್ಟಿ ಮಾಡಿಕೊಂಡು, ಚುನಾವಣಾ ಪ್ರಚಾರ ಮಾಡುವಂತ ಯೋಜನೆ ರೂಪಿಸಿದ್ದರು.
ಇಂದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ, ವೈದ್ಯರ ಸಲಹೆಯ ಮೇರೆಗೆ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ HD ಕುಮಾರಸ್ವಾಮಿ ಅವರು, ಮಣಿಪಾಲ್ ಆಸ್ಪತ್ರೆಯಿಂದ ನೇರ ಜೆಪಿ ನಗರ ನಿವಾಸಕ್ಕೆ ತೆರಳಿದ್ದಾರೆ. ನಾಳೆ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ. ನಾಳೆ 1 ಗಂಟೆಗೆ ಚಾಮರಾಜ ಕ್ಷೇತ್ರ, 3 ಗಂಟೆಗೆ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕೆ ಪ್ರಚಾರ ನಡೆಸಲಿದ್ದಾರೆ.