ಹೊಸದಿಗಂತ ಡಿಜಿಟಲ್ ಡೆಸ್ಕ್:
ತಲೈವಾ ರಜನಿಕಾಂತ್ ಅವರನ್ನು ಆಸ್ಪತ್ರೆಯಿಂದ ಡಿಸ್ವಾರ್ಜ್ ಮಾಡಲಾಗಿದೆ. ಆಸ್ಪತ್ರೆಯಿಂದ ಬಂದ ಬಳಿಕ ಸೂಪರ್ಸ್ಟಾರ್ ಮೊದಲ ಬಾರಿಗೆ ತಮ್ಮ ರಿಯಾಕ್ಷನ್ ನೀಡಿದ್ದಾರೆ.
ರಜನಿಕಾಂತ್ ಅವರಿಗೆ ಶಸ್ತ್ರಚಿಕಿತ್ಸೆಯಿಲ್ಲದ ಟ್ರಾನ್ಸ್-ಕ್ಯಾತಿಟರ್ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ಈ ಹಿಂದೆ ಹೆಲ್ತ್ ರಿಪೋರ್ಟ್ ಬಿಡುಗಡೆ ವೇಳೆ ಹೇಳಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಅಷ್ಟೆ ಅಲ್ಲ ರಜನಿ ಅವರು ತಮ್ಮ ಅಭಿಮಾನಿಗಳಿಗೆ ಪ್ರತಿಕ್ರಿಯಿಸಿದ್ದಾರೆ.
ನಾನು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ ನನ್ನ ಎಲ್ಲಾ ರಾಜಕೀಯ ಸ್ನೇಹಿತರಿಗೆ, ನನ್ನ ಎಲ್ಲಾ ಚಲನಚಿತ್ರ ಬಂಧು ಮಿತ್ರರಿಗೆ, ನನ್ನ ಎಲ್ಲಾ ಹಿತೈಷಿಗಳಿಗೆ, ಪತ್ರಿಕಾ ಮತ್ತು ಮಾಧ್ಯಮಗಳಿಗೆ, ನನ್ನ ಪ್ರಾಮಾಣಿಕ ಧನ್ಯವಾದಗಳು. ನನ್ನ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ ನನ್ನನ್ನು ಅಪಾರವಾಗಿ ಪ್ರೀತಿಸುವ ಅಭಿಮಾನಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ರಜನಿಕಾಂತ್ ಅವರ ಆರೋಗ್ಯ ವಿಚಾರಿಸಿ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ರಾಜ್ಯಪಾಲ ಟಿಎನ್ ರವಿ ಅವರಿಗೆ ಧನ್ಯವಾದ ಸಲ್ಲಿಸಿ ಪ್ರತ್ಯೇಕ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ.