ಬಸ್‌ನಲ್ಲಿ ಶೂನ್ಯ ದರ ಟಿಕೆಟ್ ಪಡೆದು ಪ್ರಯಾಣಿಸಿದ ಜಿಲ್ಲಾಧಿಕಾರಿ!

ಹೊಸದಿಗಂತ ವರದಿ ಬಾಗಲಕೋಟೆ:

ಇತರರಿಗೂ ಮಾದರಿಯಾಗುವಂತೆ ಶೂನ್ಯ ಟಿಕೆಟ್‌ ಪಡೆದು ಸರ್ಕಾರಿ ಬಸ್‌ನಲ್ಲಿ ಜಿಲ್ಲಾಧಿಕಾರಿಯೊಬ್ಬರು ಪ್ರಯಾಣಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ತೇರದಾಳಕ್ಕೆ ತೆರಳುವ ವೇಳೆ ಜಿಲ್ಲಾಧಿಕಾರಿ ಕೆ.ಎ.ಜಾನಕಿ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಸರ್ಕಾರಿ ಬಸ್ ನಲ್ಲಿ ‌ ಪ್ರಯಾಣಿಸಿದರು. ಈ ವೇಳೆ ಜಿಲ್ಲಾಧಿಕಾರಿ ಜಾನಕಿಯವರು ಶೂನ್ಯ ದರ ಟಿಕೆಟ್‌ ಪಡೆದು ಪ್ರಯಾಣಿಸಿದ್ದಾರೆ.  ಅವರೊಂದಿಗಿದ್ದ ಎಲ್ಲಾ ಮಹಿಳಾ ಅಧಿಕಾರಗಳು ಶಕ್ತಿ ಯೋಜನೆಯಡಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಶೂನ್ಯ ದರ ಟಿಕೆಟ್ ಪಡೆದಿದ್ದಾರೆ.

ಅನಾವಶ್ಯಕ ಖರ್ಚುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಪರಿಸರ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ಎಲ್ಲಾ ಅಧಿಕಾರಿಗಳು ತಮ್ಮ ಸರಕಾರಿ ವಾಹನವನ್ನು ಉಪಯೋಗಿಸದೇ, ಕಡ್ಡಾಯವಾಗಿ ಜಿಲ್ಲಾಧಿಕಾರಿಗಳೊಂದಿಗೆ ಸರ್ಕಾರಿ ಬಸ್ ಮೂಲಕವೇ ಪ್ರಯಾಣಿಸಿರುವುದು ವಿಶೇಷ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!