ಹೊಸದಿಗಂತ ವರದಿ, ಬೆಳಗಾವಿ:
ಸುವರ್ಣ ಸೌಧದಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಕೆಯ ಬಗ್ಗೆ ವಿಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ಸ್ಪೀಕರ್ ಜೊತೆಗೆ ಮಾತುಕತೆ ನಡೆಸುವುದಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಕೆ ಬಗ್ಗೆ ವಿರೋಧ ಪಕ್ಷಗಳು ವಿನಾಕಾರಣ ಆರೋಪ ಮಾಡುತ್ತಿವೆ ಎಂದರು.
ಇಂದಿನಿಂದ ಬೆಳಗಾವಿಯಲ್ಲಿ ವಿಧಾನ ಮಂಡಳ ಅಧಿವೇಶನ ಪ್ರಾರಂಭವಾಗುತ್ತಿದೆ. ಈ ಭಾಗದಲ್ಲಿ ಅಧಿವೇಶನ ಮಾಡುತ್ತಿರುವುದು ಇಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಮತ್ತು ರಾಜ್ಯದ ಹಲವಾರು ಸಮಸ್ಯೆಗಳು ಚರ್ಚೆಯಾಗಿ ರಾಜ್ಯವನ್ನು ಮುನ್ನಡೆಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ