BREAKING| ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ : ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ  ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!