ಲೋಕಸಭೆಯಲ್ಲಿ ಕಲಾಪಕ್ಕೆ ಅಡ್ಡಿ: ಮತ್ತೆ ಮೂವರು ಸಂಸದರ ಅಮಾನತು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಸೇರಿದಂತೆ, ಛತ್ತೀಸ್ ಗಡದ ಕಾಂಗ್ರೆಸ್ ಸಂಸದ ದೀಪಕ್ ಬೈಜ್ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್ ಅವರ ಮಗ ನಕುಲ್ ನಾಥ್ ಮತ್ತೆ ಮೂವರು ವಿರೋಧ ಪಕ್ಷಗಳ ಸಂಸದರನ್ನು ಲೋಕಸಭೆಯಿಂದ ಗುರುವಾರ ಅಮಾನತು ಮಾಡಲಾಗಿದೆ.

ಈ ಮೂಲಕ ಸಂಸತ್ ನ ಉಭಯ ಸದನದಿಂದ ಅಮಾನತುಗೊಂಡ ಪ್ರತಿಪಕ್ಷಗಳ ಒಟ್ಟು ಸದಸ್ಯರ ಸಂಖ್ಯೆ 146ಕ್ಕೆ ಏರಿಕೆಯಾದಂತಾಗಿದೆ.

ಸಂಸತನ್ ನಲ್ಲಿ ಡಿ.13 ರಂದು ಭದ್ರತಾ ಲೋಪ ನಡೆದಿತ್ತು.ಈ ಘಟನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ನಲ್ಲಿ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ ಡಿ.14 ರಂದು ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳಲ್ಲಿ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಹೀಗಾಗಿ ಉಭಯ ಸದನಗಳ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಡಿ.14ರಿಂದ ಈವರೆಗೂ ಒಟ್ಟು ಎರಡೂ ಸದನಗಳಿಂದ 146 ಸಂಸದರನ್ನು ಅಮಾನತು ಮಾಡಲಾಗಿದೆ.

ಗುರುವಾರ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ ಆರಂಭವಾದಾಗ ವಿಪಕ್ಷ ಸಂಸದರು ಘೋಷಣೆಗಳ ಕೂಗಿದರು.

ಸದನದ ಒಳಗೆ ಪ್ರತಿಭಟನೆ ನಡೆಸುವಂತಿಲ್ಲ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಾಂಗ್ರೆಸ್ ನ ಮೂವರು ಸಂಸದರಿಗೆ ಎಚ್ಚರಿಕೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!