ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಾಗಿನಿಂದ ಜಾತ್ಯಾತೀತ ಜನತಾದಳಲ್ಲಿ ಅಸಮಾಧಾನ ಭುಗುಲೆದ್ದಿದ್ದು, ರಾಜೀನಾಮೆ ಘಟನೆಗಳೂ ನಡೆದಿವೆ. ಈಗಾಗಲೇ ಮೈಸೂರು ಭಾಗದ ಮುಸ್ಲಿಂ ಮುಖಂಡರು ರಾಜೀನಾಮೆ ಘೋಷಿಸಿದ್ದಾರೆ. ಪಕ್ಷದಲ್ಲಿ ಇನ್ನೂ ಅಸಮದಾಧಾನ ಹೊಗೆಯಾಡುತ್ತಿದ್ದು, ಶಮನಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.
ಈ ವಿಚಾರವಾಗಿ ಇಂದು ಅಸಾಮಾಧಾನಿತರ ಸಭೆ ಕರೆಯಲಾಗಿದೆ. ಬಿಡದಿಯ ತಮ್ಮ ತೋಟದ ಮನೆಯಲ್ಲಿ ಕುಮಾರಸ್ವಾಮಿ ಸಭೆ ನಡೆಸಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರು, ಮಾಜಿ ಶಾಸಕರ ಜೊತೆ ಚರ್ಚೆ ನಡೆಸಲಿದ್ದಾರೆ.