ಸಿದ್ದು ,ಡಿಕೆಶಿ ಪ್ರಮಾಣವಚನ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ: ಕಾರ್ಯಕ್ರಮಕ್ಕೆ ಮಧು ಬಂಗಾರಪ್ಪ ಗೈರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಎದ್ದಿದೆ.

ಪ್ರಮಾಣವಚನ ಕಾರ್ಯಕ್ರಮದಿಂದ ಶಾಸಕ ಮಧು ಬಂಗಾರಪ್ಪ ದೂರ ಉಳಿದಿದ್ದಾರೆ. ಕಠೀರವ ಕ್ರೀಡಾಂಗಣದಲ್ಲಿ ನಡೆದ ನೂತನ ಸಿಎಂ, ಡಿಸಿಎಂ ಹಾಗೂ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಶಾಸಕ ಮಧು ಬಂಗಾರಪ್ಪ ಗೈರಾಗಿದ್ದಾರೆ.

ನಿನ್ನೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ರೆಡಿ ಆಗಿ ಎಂದು ಮಧು ಬಂಗಾರಪ್ಪನವರಿಗೆ ಸೂಚಿಸಲಾಗಿತ್ತಂತೆ. ಆದರೆ ಇಂದು ಬೆಳಿಗ್ಗೆ ನೂತನ ಸಚಿವರ ಪಟ್ಟಿಯಲ್ಲಿ ಹೆಸರಿರಲಿಲ್ಲ. ಹೀಗಾಗಿ ಪಕ್ಷದ ನಾಯಕರನ್ನು ಸಂಪರ್ಕಿಸಿದರೂ ಸೂಕ್ತ ಉತ್ತರ ಬಂದಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಪ್ರಮಾಣವಚನ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!