ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ: ಸಭಾಪತಿ ಕಚೇರಿಯಲ್ಲಿ ರಾಜೀನಾಮೆ ಹೈಡ್ರಾಮಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲಾರ ಲೋಕಸಭಾ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಭಿನ್ನಮತ ಸ್ಫೋಟಗೊಂಡಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಪರಿಷತ್ ಸದಸ್ಯ ಅನೀಲ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅಳಿಯನಿಗೆ ಕೋಲಾರ ಟಿಕೆಟ್ ನೀಡದಂತೆ ಒತ್ತಾಯಿಸಿ ಕೋಲಾರ ಜಿಲ್ಲಾ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ತೀರ್ಮಾನಿಸಿದ್ದು, ವಿಧಾನಸೌಧದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಕಚೇರಿಯಲ್ಲಿ ಹೈಡ್ರಾಮ ನಡೆದಿದೆ.

ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಹಾಗೂ ಅನೀಲ್ ರಾಜೀನಾಮೆ ಪತ್ರ ಹಿಡಿದು ಸಭಾಪತಿ ಬಸವರಾಜ್ ಹೊರಟ್ಟಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಸಚಿವ ಬೈರತಿ ಸುರೇಶ್ ಇಬ್ಬರು ನಾಯಕರ ಮನವೊಲಿಕೆ ಮಾಡಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಾವು ಬರುವವರೆಗೂ ಕಾಯಿರಿ. ರಾಜೀನಾಮೆ ನೀಡಬೇಡಿ ಎಂದು ಮನವೊಲಿಕೆ ಮಾಡಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಶಾಸಕ ನಜೀರ್ ಅಹ್ಮದ್, ಅನೀಲ್ ರಾಜೀನಾಮೆ ನಿರ್ಧಾರದಿಂದ ಹಿಂದೆಸರಿದಿದ್ದು, ಸಭಾಪತಿ ಕಚೇರಿಯಿಂದ ನಿರ್ಗಮಿಸಿದ ಘಟನೆ ನಡೆದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!