‘ಮಹಾ’ ಮಾಜಿ ಸಚಿವ ಆದಿತ್ಯ ಠಾಕ್ರೆ ಗೆ ಸಂಕಷ್ಟ: ಪ್ರಕರಣ ದಾಖಲಿಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿವಸೇನಾ ನಾಯಕ, ಮಾಜಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.
‘Save Aarey’ ಆಂದೋಲನದ ವಿಷಯದಲ್ಲಿ ಆದಿತ್ಯ ಠಾಕ್ರೆ ವಿರುದ್ಧ ದೂರು ದಾಖಲಿಸಲು ಸೂಚಿಸಲಾಗಿದೆ. ಆಂದೋಲನವು ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 75 ಅನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ 3 ದಿನಗಳಲ್ಲಿ ಪ್ರಕರಣ ದಾಖಲಿಸುವಂತೆ ಹೇಳಿದೆ.
ಹೀಗಾಗಿ ಕೇಂದ್ರ ಸರ್ಕಾರ ಮತ್ತು ಶಿವಸೇನೆ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರುವ ಸಾಧ್ಯತೆ ಇದೆ. ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಭಾನುವಾರವಷ್ಟೇ ಆರೆ ಕಾರ್ ಶೆಡ್ ವಿರುದ್ಧ ಆಂದೋಲನ ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!