ಹೊಸದಿಗಂತ ವರದಿ ಮಡಿಕೇರಿ:
ಮಹಾಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ರೈತರಿಗೆ ರಾಜ್ಯ ಸರಕಾರ ಕೂಡಲೇ ಬೆಳೆ ಪರಿಹಾರ ಬಿಡುಗಡೆ ಮಾಡುವಂತೆ ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಎನ್.ಎ.ರವಿಬಸಪ್ಪ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಬಾರಿಯ ಮಹಾಮಳೆಗೆ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಉಂಟಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರಕಾರ ಜಿಲ್ಲೆಯ ಜನರ ನೆರವಿಗೆ ಬರಬೇಕೆಂದು ಅವರು ಒತ್ತಾಯಿಸಿದ್ದಾರೆ.
ಜಿಲ್ಲೆಯ ಜಿಲ್ಲಾಧಿಕಾರಿಯವರ ಖಾತೆಯಲ್ಲಿ ರಾಷ್ಟ್ರೀಯ ವಿಪತ್ತು ಹಣ ಇರುವುದು ಸರಿಯಾದರೂ, ಇಂತಹ ಪರಿಸ್ಥಿತಿಯಲ್ಲಿ ಬೆಳೆ ಹಾನಿಗೆ ಒಳಗಾದ ರೈತರಿಗೆ ಹಣ ಬಿಡುಗಡೆ ಮಾಡಲು ತಡ ಮಾಡುತ್ತಿರುವುದು ಸರಿಯಲ್ಲ. ರಾಜ್ಯ ಸರಕಾರ ಇನ್ನೂ ಹೆಚ್ಚಿನ ಆಸಕ್ತಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ರವಿ ಬಸಪ್ಪ ಆಗ್ರಹಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ