WORLD PHOTOGRAPHY DAY| ಎಕೆಪಿಎ ಕುಂಬಳೆ ವಲಯದ ನೇತೃತ್ವದಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಹೊಸದಿಗಂತ ವರದಿ ಕುಂಬಳೆ:

ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ಆಲ್ ಕೇರಳ ಫೋಟೋಗ್ರಾಫರ್‍ಸ್ ಅಸೋಸಿಯೇಶನ್ (ಎಕೆಪಿಎ) ಕುಂಬಳೆ ವಲಯದ ವತಿಯಿಂದ ಮಂಗಲ್ಪಾಡಿ ಸರಕಾರೀ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಜಿಲ್ಲಾ ಉಪಾಧ್ಯಕ್ಷ ವಿಜಯನ್ ಕೆ.ನಾಯರ್ ವಿತರಣೆಗೆ ಚಾಲನೆಯನ್ನು ನೀಡಿ ಮಾತನಾಡಿ ಛಾಯಾಗ್ರಹಣವೆಂಬ ಕಲೆಯನ್ನು ಒಲಿಸಿಕೊಂಡ ಅನೇಕರು ಈ ವೃತ್ತಿಯನ್ನು ನಿಷ್ಠೆಯಿಂದ ಮಾಡುತ್ತಿದ್ದಾರೆ.

ಕಾಲಕಾಲಕ್ಕೆ ಬದಲಾವಣೆಯನ್ನು ಕಾಣುತ್ತಿರುವ ಈ ವಲಯದಲ್ಲಿ ವೃತ್ತಿನಿರತ ಛಾಯಾಗ್ರಾಹಕರು ಸಾಧನೆಯ ಮೂಲಕ ಗಮನಸೆಳೆಯುತ್ತಿದ್ದಾರೆ. ಅದರಂತೆ ಸಾಮಾಜಿಕ ಕಳಕಳಿಯಿಂದ ಅನೇಕ ಸಮಾಜಸೇವೆಯ ಮೂಲಕವೂ ಛಾಯಾಗ್ರಾಹಕರು ಸಂಘಟನೆಯ ಮೂಲಕ ಒಂದಾಗುತ್ತಿರುವುದು ಸಂತಸದ ವಿಚಾರವಾಗಿದೆ ಎಂದರು.

ಕುಂಬಳೆ ವಲಯ ಅಧ್ಯಕ್ಷ ಸುರೇಶ್ ಆಚಾರ್ಯ ಪೈವಳಿಕೆ, ಕಾರ್ಯದರ್ಶಿ ನಿತ್ಯಪ್ರಸಾದ್ ಕುಂಬಳೆ, ಕೋಶಾಧಿಕಾರಿ ವೇಣುಗೋಪಾಲ ನೀರ್ಚಾಲು, ಉಪ್ಪಳ ಯೂನಿಟ್ ಅಧ್ಯಕ್ಷ ಮಿಥುನ್, ಕಾರ್ಯದರ್ಶಿ ಸಂದೇಶ್, ಕುಂಬಳೆ ಯೂನಿಟ್ ಅಧ್ಯಕ್ಷ ನವೀನ್, ಕಾರ್ಯದರ್ಶಿ ಪ್ರಮೋದ್, ಕುಂಬಳೆ, ಉಪ್ಪಳ, ಬದಿಯಡ್ಕ ಯೂನಿಟ್ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿ ರೋಗಿಗಳೊಂದಿಗೆ ಕುಶಲೋಪರಿಯಾಗಿ ಮಾತನಾಡಿದರು. ಸರಕಾರಿ ವೈದ್ಯಾಧಿಕಾರಿ ಡಾ| ಶಾಂತಿ, ಸಿಬ್ಬಂದಿಗಳು ಉಪಸ್ಥಿತರಿದ್ದು ಹಣ್ಣುಹಂಪಲು ವಿತರಣೆಗೆ ಮಾಹಿತಿಯನ್ನು ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!