ರಾಜ್ಯೋತ್ಸವದಂದು ಎಂಇಎಸ್ ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಬ್ರೇಕ್!

ಹೊಸದಿಗಂತ ವರದಿ ಬೆಳಗಾವಿ:

ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದಂದು ಕುಚೋದ್ಯತನ ನಡೆಸುತ್ತಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಈ ಬಾರಿ ಜಿಲ್ಲಾಡಳಿತ ಮೂಗುದಾರ ಹಾಕಿದೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಭರವಸೆ ನೀಡಿರುವ ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಕನ್ನಡಿಗರ ಮನಗೆದ್ದಿದ್ದಾರೆ.

ಈ ಬಾರಿ ಎಂಇಎಸ್ ಕಿತಾಪತಿಗೆ ಅವಕಾಶ ಕೊಡುವುದಿಲ್ಲ. ಅದಾಗ್ಯೂ ಎಂಇಎಸ್ ಆದೇಶ ಮೀರಿ ನಡೆದುಕೊಂಡರೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಕನ್ನಡ ಸಂಘಟನೆಗಳ ಮನವಿ ಮೇರೆಗೆ ಈ ಬಾರಿ ಒಂದು ಕೋಟಿ ರೂ.ಗಳ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು. ಈ ಬಾರಿಯೂ ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಆಶ್ವಾಸನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!