ಹೊಸದಿಗಂತ ವರದಿ, ಅಂಕೋಲಾ:
ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕಾರವಾರಕ್ಕೆ ತೆರಳುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಂಕೋಲಾದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಹಿರಿಯ ಮುಖಂಡ ಭಾಸ್ಕರ ನಾರ್ವೇಕರ್, ಹಿಂದುಳಿದ ವರ್ಗಗಳ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ, ಪುರಸಭೆ ಉಪಾಧ್ಯಕ್ಷೆ ರೇಖಾ ಗಾಂವಕರ್, ಪ್ರಮುಖರುಗಳಾದ ಚಂದ್ರಕಾಂತ ನಾಯ್ಕ, ಅನುರಾಧಾ ನಾಯ್ಕ, ಬಾಲಕೃಷ್ಣ ನಾಯ್ಕ, ಸಂದೀಪ ಗಾಂವಕರ್, ಪ್ರವೀಣ ನಾಯ್ಕ, ನಾಗರಾಜ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ನೂತನ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಂಕೋಲಾ ತಾಲೂಕು ರಂಗಭೂಮಿ ಕಲಾವಿದರ ವೇದಿಕೆಯ ಸದಸ್ಯರು ಭೇಟಿ ಮಾಡಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂಗೆ ವಿನಾಯತಿ ನೀಡಿ ರಂಗಭೂಮಿ ಚಟುವಟಿಕೆಗಳು ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ನಿಗದಿತ ಸಮಯದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಲು ಸೂಚನೆ ನೀಡುವುದಾಗಿ ತಿಳಿಸಿದರು.
ತಾಲೂಕು ರಂಗಭೂಮಿ ಕಲಾವಿದರ ವೇದಿಕೆ ಅಧ್ಯಕ್ಷ ನಾಗರಾಜ ಜಾಂಬಳೇಕರ್, ಕಲಾವಿದರುಗಳಾದ ಸುಜೀತ್ ನಾಯ್ಕ, ಧನಂಜಯ ನಾಯ್ಕ, ವಿನಾಯಕ ನಾಯ್ಕ, ಅರವಿಂದ ನಾಯ್ಕ, ಮೋಹನ ನಾಯ್ಕ, ವಿದ್ಯಾಧರ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.