ಹೊಸದಿಗಂತ ವರದಿ ಕೊಪ್ಪಳ:
ಜಿಲ್ಲಾ ರಜತ ಮಹೋತ್ಸವ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 09ರಂದು ಮಹಿಳಾ ವಾಕ್ಥಾನ್ ನಡೆಯಿತು.
ಈ ನಿಮಿತ್ತ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಗಂಜ್ ಸರ್ಕಲ್ವರೆಗೆ ಮಹಿಳೆಯರು ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸೇರಿ ಮತ್ತಿತರರು ಇದ್ದರು.