ಪಿಎಸ್‌ಐ ಪರೀಕ್ಷಾ ಅಕ್ರಮ ನಡೆಸಲು ದೊಡ್ಡ ಮೊತ್ತದ ಹಣ ಪಡೆದ ಬಗ್ಗೆ ಒಪ್ಪಿಕೊಂಡ ದಿವ್ಯಾ ಹಾಗರಗಿ

ಹೊಸದಿಗಂತ ವರದಿ, ಕಲಬುರಗಿ
ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆಸಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಮಾಹಿತಿ ಬಿಚ್ಚಿಟ್ಟಿದ್ದಾಳೆ.
ದಿವ್ಯಾ ಹಾಗರಗಿ ಒಡೆತನದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪರೀಕ್ಷಾ ಅಕ್ರಮದಲ್ಲಿ ಎರಡು ಟೀಂಗಳಿಂದಲೂ ದೊಡ್ಡ ಮೊತ್ತದ ಹಣವನ್ನು ಪಡೆದ ಬಗ್ಗೆ ಪೊಲೀಸ್‌ ವಿಚಾರಣೆಯಲ್ಲಿ ಮಾಹಿತಿ ನೀಡಿದ್ದಾಳೆ.
ಆರ್.ಡಿ.ಪಾಟೀಲ್ ಮತ್ತು ಮಂಜುನಾಥ್ ಗ್ಯಾಂಗ್ ನಿಂದ ದೊಡ್ಡ ಮಟ್ಟದ ಹಣ ಸಂದಾಯ ಮಾಡಿಸಿದ್ದು, ಆರ್‌ಡಿ‌ಪಾಟೀಲ ಮತ್ತು ಮಂಜುನಾಥ್ ಬಳಿಯಿಂದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ್ ಹಣವನ್ನು ಕೊಡಿಸಿದ್ದನು ಎಂದು ಬಾಯಿ ಬಿಟ್ಟಿದ್ದಾಳೆ.
ದಿವ್ಯಾ ಹಾಗರಗಿ, ಆರ್.ಡಿ.ಪಾಟೀಲ್, ಮಂಜುನಾಥ್ ಮಧ್ಯೆ ಮಧ್ಯವರ್ತಿ ಯಾಗಿ ಕಾಶಿನಾಥ್ ಕೆಲಸ ಮಾಡುತ್ತಿದ್ದನು.ಇದರ ಜೊತೆಗೆ ಕಾಶಿನಾಥ್ ಕೂಡ ಅಕ್ರಮದಲ್ಲಿ ದೊಡ್ಡ ಪ್ರಮಾಣದಲ್ಲಿ ಮೊತ್ತವನ್ನು ಪಡೆದಿರುವುದು ಬೆಳಕಿಗೆ ಬಂದಿದೆ.
ಸದ್ಯ ಪ್ರಕರಣವು ಬೆಳಕಿಗೆ ಬರುತ್ತಿದ್ದಂತೆ ಕಾಶಿನಾಥ್ ತಲೆಮರೆಸಿಕೊಂಡಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!