ಹೊಸದಿಗಂತ ವರದಿ, ಅಂಕೋಲಾ:
ಪಟ್ಟಣದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಹಚ್ಚುವ ಸಂಬಂದ ಹಿರಿಯರು ಮತ್ತು ಯುವಕರ ಮಧ್ಯೆ ವಾಗ್ವಾದ ನಡೆದಿದ್ದು ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಮಧ್ಯ ಪ್ರವೇಶಿಸಿ ಸಮಾಧಾನ ಪಡಿಸಿದ್ದಾರೆ.
ಪಟ್ಟಣದಲ್ಲಿ ಈದ್ ಮಿಲಾದ್ ಪ್ರಯುಕ್ತ ವಿವಿಧ ರೀತಿಯ ಟ್ಯಾಬ್ಲೋಗಳೊಂದಿಗೆ ಮೆರವಣಿಗೆ ನಡೆಸಲಾಗಿತ್ತು ಮೆರವಣಿಗೆಯಲ್ಲಿ ಕೆಲವರು ಡಿಜೆ ಬಳಸಿಕೊಂಡು ಸಾಗಿದ್ದರು. ಒಂದು ಗುಂಪು ಮಾತ್ರ ಅತ್ಯಂತ ದೊಡ್ಡದಾಗಿ ಡಿಜೆ ಮೂಲಕ ಹಾಡುಗಳನ್ನು ಹಚ್ಚಿಕೊಂಡು ಹೋಗುತ್ತಿದ್ದರು.ಇದಕ್ಕೆ ಮೆರವಣಿಗೆಯಲ್ಲಿ ಇದ್ದ ಕೆಲವರು ಅಸಮಾಧಾನ ವ್ಯಕ್ತಪಡಿಸಿ ಅದನ್ನು ಅಂಕೋಲಾ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಅವರ ಗಮನಕ್ಕೆ ತಂದಿದ್ದರು.
ಇದು ಮೆರವಣಿಗೆಯಲ್ಲಿದ್ದ ಹಿರಿಯರು ಮತ್ತು ಡಿಜೆ ಹಚ್ಚಿದ ಯುವಕರ ಮಧ್ಯೆ ಅಸಮಾಧಾನಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸಿದ ಪೊಲೀಸ್ ಅಧಿಕಾರಿ ಸಂತೋಷ ಶೆಟ್ಟಿಅತ್ಯಂತ ಶಾಂತವಾಗಿ ಯುವಕರಿಗೆ ಮನವರಿಕೆ ಮನವರಿಕೆ ಮಾಡಿಕೊಟ್ಟು ಮೆರವಣಿಗೆ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ